ಉಪ್ಪಿನಂಗಡಿ: ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ
Update: 2020-07-13 04:24 GMT
ಉಪ್ಪಿನಂಗಡಿ, ಜು.13: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿನ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಸೋಮವಾರ ಬೆಳ್ಳಂಬೆಳಗ್ಗೆ ಆರಂಭಿಸಲಾಗಿದೆ.
ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದು, ಇದರ ತೆರವಿಗೆ ಉಪ್ಪಿನಂಗಡಿ ಗ್ರಾ.ಪಂ. ಮೂರು ದಿನಗಳ ಗಡುವು ನೀಡಿತ್ತು. ಆದರೆ ತೆರವುಗೊಳಿಸದ ಹಿನ್ನೆಲೆ ಸೋಮವಾರ ಬೆಳಗ್ಗೆ ಆರು ಗಂಟೆಯಿಂದ ಎರಡು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯಿತು.
ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ. ಇಒ ನವೀನ್ ಭಂಡಾರಿ, ಗ್ರಾ.ಪಂ. ಪಿಡಿಒ ವಿಲ್ಪ್ರೆಡ್ ಲಾರೆನ್ಸ್ ರೊಡ್ರಿಗಸ್ ಹಾಜರಿದ್ದರು.