ದ.ಕ. ಜಿಲ್ಲೆಯಲ್ಲಿ 1 ಸಾವಿರ ಹಾಸಿಗೆಗಳ ಪ್ರಾದೇಶಿಕ ಕೋವಿಡ್ ಆಸ್ಪತ್ರೆ ನಿರ್ಮಾಣಕ್ಕೆ ಮಿಥುನ್ ರೈ ಆಗ್ರಹ

Update: 2020-07-13 09:35 GMT

ಮಂಗಳೂರು, ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯಲ್ಲಿ 1,000 ಸಾವಿರ ಹಾಸಿಗೆಗಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.  

ವೆನ್ಲಾಕ್ ಆಸ್ಪತ್ರೆಯನ್ನು ನಮ್ಮ ಜಿಲ್ಲೆಯವರು ಮಾತ್ರವಲ್ಲದೇ ನೆರೆಯ ಕೊಡಗು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ರೋಗಿಗಳು ಆಶ್ರಯಿಸಿದ್ದಾರೆ. ಈಗ ಅದು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡಾಗಿರುವ ಕಾರಣ ಇತರ ಆರೋಗ್ಯ ಸಮಸ್ಯೆಯುಳ್ಳ ರೋಗಿಗಳು ಕಷ್ಟಪಡುವಂತಾಗಿವೆ. ಅಲ್ಲದೆ ಬೆಂಗಳೂರಿನಂತೆ ಮಂಗಳೂರಿನಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚೆಚ್ಚು ಬರುತ್ತಿರುವುದರಿಂದ ಇಲ್ಲಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಹಾಸಿಗೆಗಳು ಕೊರತೆಯಾಗಿ ಇದರ ಪರಿಣಾಮ ಸೋಂಕಿನಿಂದಾಗುವ ಅಪಾಯ ಕೈ ಮೀರಲಿದ್ದು, ಮುನ್ನೆಚ್ಚರಿಕೆಯಾಗಿ ಅತೀ ಶೀಘ್ರದಲ್ಲಿ ಕೋವಿಡ್ ಪ್ರಾದೇಶಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು. ಜೊತೆಗೆ ಜಿಲ್ಲೆಯಲ್ಲಿ ಸಮೂಹ ತಪಾಸಣೆ ಮಾಡಬೇಕೆಂದು ಮಿಥುನ್ ರೈ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News