ಮಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶ್ರೀಪತಿ ಕಲ್ಲೂರಾಯರಿಗೆ 'ಗೋಲ್ಡನ್ ಏಮ್' ಪ್ರಶಸ್ತಿ

Update: 2020-07-13 10:10 GMT

ಕೊಣಾಜೆ, ಜು.13: ಮಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶ್ರೀಪತಿ ಕಲ್ಲೂರಾಯ ಅವರು 'ಗೋಲ್ಡನ್ ಏಮ್' ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಹರ್ಯಾಣದ ಡೈನೆರ್ಜಿಕ್ ಬ್ಯುಸಿನೆಸ್‌ ಸೊಲ್ಯುಷನ್ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತೀ ವರ್ಷ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ 'ಗೋಲ್ಡನ್ ಏಮ್' ಪ್ರಶಸ್ತಿಗಳನ್ನು ನೀಡುತ್ತಾ ಬರುತ್ತಿದ್ದು, ಈ ಪ್ರಶಸ್ತಿಗಳಲ್ಲಿ ಅರ್ಥಶಾಸ್ತ್ರ ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಗಾಗಿ ಡಾ.ಶ್ರೀಪತಿ ಕಲ್ಲೂರಾಯರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಶುಕ್ರವಾರ ನಡೆದ ವೆಬಿನಾರ್ ನಲ್ಲಿ ಪ್ರಶಸ್ತಿಯನ್ನು ವಿತರಿಸಲಾಯಿತು.

ಪ್ರೊ.ಕಲ್ಲೂರಾಯರು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ, ಹಣಕಾಸು ಅಧಿಕಾರಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಹಾಗೂ ವಿವಿಧ ಆಡಳಿತಾತ್ಮಕ ಜವಾಬ್ದಾರಿ ವಹಿಸಿದ್ದು, ಕಳೆದ ಮಾರ್ಚ್‌ ನಲ್ಲಿ ನಿವೃತರಾಗಿದ್ದರು. ಪ್ರಸ್ತುತ ಯಕ್ಷಗಾನ ಅಧ್ಯಯನ ಕೇಂದ್ರ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News