ಬ್ಯಾಂಕ್ ಖಾತೆಯಿಂದ ಹಣ ದೋಚಿದ ದುಷ್ಕರ್ಮಿಗಳು: ದೂರು ದಾಖಲು

Update: 2020-07-13 13:23 GMT

ಬೆಂಗಳೂರು, ಜು.13: ಆನ್‍ಲೈನ್ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ದುಷ್ಕರ್ಮಿಗಳು 19 ಸಾವಿರ ರೂ.ನಗದು ದೋಚಿದ್ದು, ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ನಿವಾಸಿ ನಂದ ಕಿಶೋರ್ ಎಂಬುವರು ಹಣ ಕಳೆದುಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ನಂದ ಕಿಶೋರ್, ಇತ್ತೀಚೆಗೆ ಏರ್ ಟೆಲ್ ಹಣ ಪಾವತಿವಾಗಿ ಗೂಗಲ್ ಪೇನಿಂದ 1,176 ರೂ. ಸಂದಾಯ ಮಾಡಿದ್ದಾರೆ. ಆದರೆ, ಹಣ ಪಾವತಿ ಆಗಿಲ್ಲ. ಹೀಗಾಗಿ, ವಿಚಾರಣೆ ಮಾಡಲು ಗೂಗಲ್ ಪೇ ಗ್ರಾಹಕರ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಇವರ ಬ್ಯಾಂಕ್ ಖಾತೆಯ ಮಾಹಿತಿ ಪಡೆದು, 19 ಸಾವಿರ ರೂ. ನಗದು ದೋಚಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News