ವಿಧಾನ ಮಂಡಲ ಸಮಿತಿ ಸಭೆಗಳನ್ನು ಸ್ಥಗಿತಗೊಳಿಸಲು ಸ್ಪೀಕರ್ ಆದೇಶ
Update: 2020-07-13 18:03 GMT
ಬೆಂಗಳೂರು, ಜು. 13: ಕೊರೋನ ಸೋಂಕು ನಿಯಂತ್ರಣಕ್ಕೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ವಿಧಾನ ಮಂಡಲ ಸಮಿತಿ ಸಭೆಗಳನ್ನು ಸ್ಥಗಿತಗೊಳಿಸುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸದಸ್ಯರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲ ಸಮಿತಿ ಸಭೆಯನ್ನು ಸುರಕ್ಷಿತ ಅಂತರ ಕಾಯ್ದುಕೊಂಡು ಅಗತ್ಯವಿರುವ ಅಧಿಕಾರಿಗಳೊಂದಿಗೆ ನಡೆಸಲು ಎಲ್ಲ ಸಮಿತಿ ಅಧ್ಯಕ್ಷರುಗಳಿಗೆ ತಿಳಿಸಲಾಗಿರುತ್ತದೆ. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.