ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಇಂದು ಸಭೆ ಕರೆದ ಬಿಜೆಪಿ ರಾಜ್ಯ ಘಟಕ

Update: 2020-07-14 07:32 GMT
ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ

ಜೈಪುರ, ಜು.14: ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಇಂದು ಸಭೆ ಕರೆದಿದೆ.

ಮಾಜಿ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯ, ರಾಜೇಂದ್ರ ರಾಥೋಡ್, ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

"ನಮ್ಮ ನಾಯಕರು ಒಗ್ಗಟ್ಟಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಆದರೆ, ಆಂತರಿಕ ಜಗಳವಿದೆ ಎನ್ನುವುದು ಸ್ಪಷ್ಟ. ಆಂತರಿಕ ಕಚ್ಚಾಟದಿಂದಾಗಿಯೇ ಅವಮಾನಕ್ಕೀಡಾಗಿರುವ ಸಚಿನ್ ಪೈಲಟ್ ಸತತ ಎರಡನೇ ದಿನ ಶಾಸಕಾಂಗ ಪಕ್ಷದ ಸಭೆಯಿಂದ ದೂರ ಉಳಿದಿದ್ದಾರೆ. ಈ ಸಂದರ್ಭದಲ್ಲಿ ನಾವು ಬಹುಮತ ಸಾಬೀತಿಗೆ ಒತ್ತಾಯಿಸುವುದಿಲ್ಲ'' ಎಂದು ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಹೇಳಿದ್ದಾರೆ.

ನೆರೆಯ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ದ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ರಾಹುಲ್ ಗಾಂಧಿ ಯುವಕರು ಮಿಂಚುವುದನ್ನು ಇಷ್ಟಪಡುವುದಿಲ್ಲ. ರಾಹುಲ್ ಕಾಂಗ್ರೆಸ್ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಸೃಷ್ಟಿಸುತ್ತಾರೆ. ಆ ನಂತರ ಪಕ್ಷದ ಆಂತರಿಕ ಬಿಕ್ಕಟ್ಟನ್ನು ಶಮನಗೊಳಿಸಲಾಗದೆ ಬಿಜೆಪಿಯನ್ನು ನಿಂದಿಸುತ್ತಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News