ರಾಜ್ಯದಲ್ಲಿ 24 ಗಂಟೆಗಳಲ್ಲಿ ಕೋವಿಡ್ ಗೆ 87 ಮಂದಿ ಸಾವು: 2,496 ಮಂದಿಗೆ ಸೋಂಕು ದೃಢ

Update: 2020-07-14 16:36 GMT

ಬೆಂಗಳೂರು, ಜು.13: ಕರ್ನಾಟಕದಲ್ಲಿ ಕೊರೋನ ನಾಗಾಲೋಟ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ 44 ಸಾವಿರದ ಗಡಿದಾಟಿದೆ. ಕೆಲ ದಿನಗಳಿಂದ ದೈನಂದಿನ 2 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ಜನತೆಯಲ್ಲಿ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ ಮತ್ತೆ 2,496 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 87 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 842ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ 56 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿ 5, ವಿಜಯಪುರ 3, ಬಾಗಲಕೋಟೆ 4, ಚಾಮರಾಜನಗರ 2, ಮೈಸೂರು 4, ದಕ್ಷಿಣ ಕನ್ನಡ 4, ಚಿಕ್ಕಮಗಳೂರು 3, ರಾಯಚೂರು 2, ಕಲಬುರಗಿ, ಧಾರವಾಡ, ದಾವಣಗೆರೆ, ಹಾಸನದಲ್ಲಿ ತಲಾ ಒಂದು ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,267, ಮೈಸೂರು 125, ಕಲಬುರಗಿ 121, ಧಾರವಾಡ 100, ಬಳ್ಳಾರಿ 99, ಕೊಪ್ಪಳ 98, ದಕ್ಷಿಣ ಕನ್ನಡ 91, ಬಾಗಲಕೋಟೆ 78, ಉಡುಪಿ 73, ಬೆಳಗಾವಿ 64, ಉತ್ತರ ಕನ್ನಡ 64, ವಿಜಯಪುರ 52, ತುಮಕೂರು 47, ಬೀದರ್ 42, ಮಂಡ್ಯ 38, ರಾಯಚೂರು 25, ದಾವಣಗೆರೆ 17, ಬೆಂಗಳೂರು ಗ್ರಾಮಾಂತರ 14, ಚಿಕ್ಕಬಳ್ಳಾಪುರ 13, ಕೋಲಾರ 11, ಶಿವಮೊಗ್ಗ 10, ಕೊಡಗು 10, ಚಿತ್ರದುರ್ಗ 10, ಗದಗ 9, ಚಾಮರಾಜನಗರ 8, ಹಾಸನ 4, ಚಿಕ್ಕಮಗಳೂರು 3, ಯಾದಗಿರಿ 2 ಮತ್ತು ರಾಮನಗರದಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ. 

ಒಟ್ಟಾರೆ ರಾಜ್ಯದಲ್ಲಿ 44,077 ಕೊರೋನ ಸೋಂಕಿತರ ಪೈಕಿ 17,390 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 1142 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 842 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 25,839 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News