ಕೋವಿಡ್ ಸಂಕಷ್ಟದ ನಡುವೆಯೂ ಪಿಯು ಫಲಿತಾಂಶ ಪ್ರಕಟಿಸಿದ ಮೊದಲ ರಾಜ್ಯ ಕರ್ನಾಟಕ: ಸುರೇಶ್‍ ಕುಮಾರ್

Update: 2020-07-14 15:48 GMT

ಬೆಂಗಳೂರು, ಜು.14: ಕೋವಿಡ್-19 ಸಂಕಷ್ಟದ ನಡುವೆ ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನವನ್ನು ಯಶಸ್ವಿಯಾಗಿ ಮುಗಿಸಿ, ಫಲಿತಾಂಶ ಪ್ರಕಟಿಸಿರುವ ದೇಶದ ಇತರೆ ರಾಜ್ಯಗಳಲ್ಲಿ ಕರ್ನಾಟಕವೇ ಮೊದಲು ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಪಿಯು ಮಂಡಳಿಯಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ರಾಜ್ಯಗಳಲ್ಲಿ ಪಿಯು ಫಲಿತಾಂಶಗಳ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ನಮ್ಮ ರಾಜ್ಯದ ಪಿಯು ಮಂಡಳಿ ಕೋವಿಡ್-19 ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ನಿರ್ದೇಶಕಿ ಕನಗವಲ್ಲಿ ಉಪಸ್ಥಿತರಿದ್ದರು.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅಧೀರರಾಗುವ ಅಗತ್ಯವಿಲ್ಲ. ಪರೀಕ್ಷೆಯೇ ಜೀವನದ ಅಂತಿಮ ಗುರಿಯಲ್ಲ. ಪೂರಕ ಪರೀಕ್ಷೆಯಲ್ಲಿ ಆ ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ತಯಾರಿ ಮಾಡಿಕೊಳ್ಳಲು ಪೋಷಕರು ನೆರವಾಗಲಿ.

-ಸುರೇಶ್‍ ಕುಮಾರ್, ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News