ಗಂಗೊಳ್ಳಿ: ದೇವಸ್ಥಾನಕ್ಕೆ ನುಗ್ಗಿ ಸೊತ್ತು ಕಳವು

Update: 2020-07-14 16:19 GMT

ಗಂಗೊಳ್ಳಿ, ಜು.14: ನಾಡ ಗ್ರಾಮದ ಪಡುಕೋಣೆಯಲ್ಲಿರುವ ಶ್ರೀರಾಮ ಮಂದಿರ ದೇವಸ್ಥಾನಕ್ಕೆ ಜು.13ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ದೇವಸ್ಥಾನದ ಎದುರಿನ ಬಾಗಿಲಿನ ಹಾಗೂ ಗರ್ಭಗುಡಿಯ ಬಾಗಿಲಿನ ಬೀಗ ಒಡೆದು, ಒಳನುಗ್ಗಿದ ಕಳ್ಳರು, ದೇವರ ವಿಗ್ರಹಕ್ಕೆ ಹಾಕಿದ್ದ ಸುಮಾರು 3 ಕೆ.ಜಿ ಬೆಳ್ಳಿಯ ಪ್ರಭಾವಳಿಯನ್ನು ಕಳವು ಮಾಡಿದ್ದಾರೆ. ಇವುಗಳ ಮೌಲ್ಯ ಸುಮಾರು 1,10,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News