ಲಾಕ್‍ಡೌನ್ ನಿಂದ ರದ್ದಾದ ಜೆಡಿಎಸ್ ಸಭೆಗಳು

Update: 2020-07-14 19:03 GMT

ಬೆಂಗಳೂರು, ಜು.14: ಲಾಕ್‍ಡೌನ್ ಕಾರಣದಿಂದಾಗಿ ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ, ಮುಂದಿನ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಆಹ್ವಾನಿಸಿದ್ದ ಸಭೆಗಳನ್ನು ಜೆಡಿಎಸ್ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಲಾಕ್‍ಡೌನ್ ಜಾರಿಗೊಳಿಸಿರುವ ಹಿನ್ನೆಲೆ ಈ ವಾರ ನಡೆಸಬೇಕಿದ್ದ ಜಿಲ್ಲಾವಾರು ಸಭೆಗಳನ್ನು ಮುಂದೂಡಲಾಗಿದೆ.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ಕಳೆದ ವಾರ ಪಕ್ಷದ ಮುಖಂಡರ ಸಭೆಗಳನ್ನು ಆರಂಭಿಸಲಾಗಿತ್ತು. ಈಗಾಗಲೇ ಬೆಂಗಳೂರು ನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಮುಖಂಡರ ಸಭೆ ನಡೆಸಲಾಗಿತ್ತು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋೀಂಕಿನ ಹಿನ್ನೆಲೆ ಆಯಾ ಜಿಲ್ಲೆಯ ಮುಖಂಡರ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News