ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್: ನಾಗರಿಕರ ಸಹಕಾರ ಕೋರಿದ ಸಿಎಂ

Update: 2020-07-15 03:59 GMT

ಬೆಂಗಳೂರು, ಜು.15: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರ(ಜು.14) ರಾತ್ರಿ 8 ಗಂಟೆಯಿಂದ ಆರಂಭಗೊಂಡಂತೆ ಮುಂದಿನ ಬುಧವಾರ (ಜು.22) ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ನಾಗರಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News