ಉಡುಪಿ ಜಾಮಿಯಾ ಮಸೀದಿಯಲ್ಲಿ ಸಾಮೂಹಿಕ ನಮಾಝ್‌ ತಾತ್ಕಾಲಿಕ ಸ್ಥಗಿತ

Update: 2020-07-15 09:43 GMT

ಉಡುಪಿ, ಜು.15: ಕೊರೋನ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಜಾರಿಗೊಳಿಸಿದ ಹೊಸ ಆದೇಶದಂತೆ ಉಡುಪಿ ಜಾಮಿಯಾ ಮಸೀದಿಯಲ್ಲಿ ಎಲ್ಲ ರೀತಿಯ ಸಾಮೂಹಿಕ ನಮಾಝ್ ನಿರ್ವಹಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಧಾರ್ಮಿಕ ಆರಾಧನಾಲಯಗಳಲ್ಲಿ 20ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂಬ ಸರಕಾರದ ಆದೇಶ ಮತ್ತು ಉಡುಪಿಯಲ್ಲಿ ಪ್ರತಿನಿತ್ಯ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಆದುದರಿಂದ ಎಲ್ಲರು ಮನೆಯಲ್ಲಿಯೇ ನಮಾಝನ್ನು ನಿರ್ವಹಿಸುವಂತೆ ಮತ್ತು ಆಡಳಿತ ಸಮಿತಿಯೊಂದಿಗೆ ಸಹಕರಿಸಬೇಕು ಎಂದು ಮಸೀದಿಯ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಕಟನೆೆಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News