ಸಚಿನ್ ಪೈಲಟ್ ಗೆ ಪಕ್ಷದ ಬಾಗಿಲು ಮುಚ್ಚಿಲ್ಲ: ಕಾಂಗ್ರೆಸ್ ಹೇಳಿಕೆ

Update: 2020-07-15 17:02 GMT

 ಜೈಪುರ, ಜು.15: ರಾಜಸ್ತಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಗೆ ಪಕ್ಷದ ಬಾಗಿಲನ್ನು ಮುಚ್ಚಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜಸ್ತಾನದ ಉಸ್ತುವಾರಿ ಅವಿನಾಶ್ ಪಾಂಡೆ ಬುಧವಾರ ಹೇಳಿದ್ದಾರೆ.

ದೇವರು ಅವರಿಗೆ ಒಳ್ಳೆಯ ಬುದ್ಧಿ ನೀಡಲಿ ಮತ್ತು ಅವರಿಗೆ ತಮ್ಮ ತಪ್ಪಿನ ಅರಿವಾಗಲಿ. ಬಿಜೆಪಿ ಒಡ್ಡಿರುವ ಬಲೆಯಿಂದ ಅವರು ಪಾರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪಾಂಡೆ ಹೇಳಿದ್ದಾರೆ.

ಆದರೆ ಬಿಜೆಪಿ ಸೇರುವುದಿಲ್ಲ ಎಂದು ಸಚಿನ್ ಪೈಲಟ್ ಬುಧವಾರ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News