ವಿದ್ಯುತ್ ಕಂಬಕ್ಕೆ ರಿಕ್ಷಾ ಢಿಕ್ಕಿ: ಅಪಾರ ನಷ್ಟ

Update: 2020-07-15 17:26 GMT

ಕಾರ್ಕಳ, ಜು.15: ರಿಕ್ಷಾವೊಂದು ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಮೆಸ್ಕಾಂಗೆ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಘಟನೆ ಜು.13 ರಂದು ಸಂಜೆ 6:30ರ ಸುಮಾರಿಗೆ ಬೈಲೂರು ಗ್ರಾಮದ ಗುರುಕೃಪಾ ಆಸ್ಪತ್ರೆಯ ಎದುರು ನಡೆದಿದೆ.

ಆಟೋ ರಿಕ್ಷಾ ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ರಸ್ತೆಯ ಬದಿಯಲ್ಲಿ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಎರಡು ವಿದ್ಯುತ್ ಕಂಬಗಳು ಹಾಗೂ ಆಟೋ ರಿಕ್ಷಾ ಜಖಂಗೊಂಡಿವೆ. ಇದರಿಂದ ಮೆಸ್ಕಾಂಗೆ 37,000ರೂ. ನಷ್ಟ ಉಂಟಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News