Breaking News: ಜೈಲಿನಲ್ಲಿದ್ದ ಹೋರಾಟಗಾರ ವರವರ ರಾವ್ ಗೆ ಕೊರೋನ ಸೋಂಕು ದೃಢ

Update: 2020-07-16 12:56 GMT

ಹೊಸದಿಲ್ಲಿ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.

ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ಹೇಳಿದ್ದ ನಂತರ ತಲೋಜಾ ಸೆಂಟ್ರಲ್ ಜೈಲಿನಿಂದ ಅವರನ್ನು ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News