ಪರಿಸರ ಪರಿಣಾಮ ಅಧ್ಯಯನ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ಹೈಕೋರ್ಟ್

Update: 2020-07-16 13:55 GMT

ಬೆಂಗಳೂರು, ಜು.16: ಕೇಂದ್ರ ಸರಕಾರದ ಪರಿಸರ ಪರಿಣಾಮ ಅಧ್ಯಯನ-2020(ಇಐಎ) ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಕಾಲಾವಕಾಶವನ್ನು ನೀಡಿ ಆದೇಶಿಸಿದೆ.

ಇಐಎ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ಕರಡು ಅಧಿಸೂಚನೆ ಬಗ್ಗೆ ಸಮರ್ಪಕವಾಗಿ ಸಾರ್ವಜನಿಕ ಪ್ರಚಾರ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿತು. ಇಲ್ಲವಾದರೆ ಕರಡು ಅಧಿಸೂಚನೆಗೆ ತಡೆ ನೀಡುವುದಾಗಿ ಎಚ್ಚರಿಕೆಯನ್ನು ನೀಡಿದೆ.

ಪರಿಸರ ಪರಿಣಾಮ ಅಧ್ಯಯನ 2020ರ ನೀತಿಗೆ ತಿದ್ದುಪಡಿ ತಂದು ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಸಾರ್ವಜನಿಕರ ಆಕ್ಷೇಪಣೆಗೂ ಮೊದಲು ಕರಡು ಸೂಚನೆ ಬಗ್ಗೆ ವ್ಯಾಪಕ ಪ್ರಚಾರ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಸಂಬಂಧ ಇತ್ತೀಚೆಗೆ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News