ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ, ಸಂಸದ, ಜಿಲ್ಲಾಧಿಕಾರಿ

Update: 2020-07-16 15:37 GMT

ಮಂಗಳೂರು, ಜು.16: ನಗರದ ಪಂಪ್‌ವೆಲ್ ಸಮೀಪದ ಇಂಡಿಯಾನ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇಂಡಿಯಾನ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದಿಂದ ಆಸ್ಪತ್ರೆಗೆ ತೆರಳಿ ಕೂಲಂಕಷವಾಗಿ ಪರಿಶೀಲನೆ ನಡೆಸಲಾಯಿತು.

ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ, ಬಿಲ್ ‌ದರ, ಕೋವಿಡ್ ರೋಗಿಗಳಿಗೆ ಮೀಸಲಾದ ಬೆಡ್‌ಗಳು, ಆಸ್ಪತ್ರೆಯಲ್ಲಿ ದಾಖಲಾದ ಕೋವಿಡ್ ರೋಗಿಗಳ ಸಂಖ್ಯೆ, ಗುಣಮುಖರಾದವರು, ಮೃತಪಟ್ಟವರ ಎಲ್ಲ ಮಾಹಿತಿಯನ್ನು ಆಸ್ಪತ್ರೆಯ ಆಡಳಿತ ಮುಖ್ಯಸ್ಥರಿಂದ ಪಡೆದುಕೊಳ್ಳಲಾಯಿತು ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಡಾ.ರತ್ನಾಕರ್ ತಿಳಿಸಿದ್ದಾರೆ.

ಜಿಲ್ಲಾಡಳಿತದ ಪ್ರಶ್ನೆಗಳಿಗೆ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ ಮಾಹಿತಿ ನೀಡಿದರು. ಪರಿಶೀಲನೆ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಡಾ.ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News