ಬೆಂಗಳೂರು: ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

Update: 2020-07-16 16:50 GMT

ಬೆಂಗಳೂರು, ಜು.16: ಕೊರೋನ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ಇಲ್ಲಿನ ಎಂಎಸ್ ಪಾಳ್ಯ ಬಳಿ ನಡೆದಿದೆ.

ಕೊರೋನ ಸೋಂಕಿನಿಂದ ಬಳಲುತ್ತಿದ್ದ 86 ವರ್ಷದ ವ್ಯಕ್ತಿಯೊಬ್ಬರು ಬುಧವಾರ ಮೃತಪಟ್ಟಿದ್ದರು. ಇಲ್ಲಿನ ಎಂ.ಎಸ್ ಪಾಳ್ಯ ಸಮೀಪದ ಸ್ಮಶಾನಕ್ಕೆ ಮೃತದೇಹವನ್ನು ಸಂಬಂಧಿಕರು ತಂದಿದ್ದರು. ಆದರೆ, ವಸತಿ ಪ್ರದೇಶ ಸ್ಮಶಾನಕ್ಕೆ ಹತ್ತಿರವಿದೆ. ಈ ಹಿನ್ನೆಲೆ, ನಾವು ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಈ ಹಿನ್ನೆಲೆ ವಿದ್ಯಾರಣ್ಯಪುರ ಠಾಣಾ ಪೊಲೀಸರು, ಬಿಬಿಎಂಪಿ ಸಿಬ್ಬಂದಿ ಸೂಚಿಸಿದ ಸ್ಥಳದಲೇ ಅಂತ್ಯಸಂಸ್ಕಾರ ಮಾಡಲು ಸಂಬಂಧಿಕರ ಮನವೊಲಿಸಿದ ಬಳಿಕ, ಇದಕ್ಕೆ ಒಪ್ಪಿ ಕುಟುಂಬಸ್ಥರು ಆಂಬ್ಯುಲೆನ್ಸ್ ನಲ್ಲಿ ಮೃತದೇಹ ಕೊಂಡೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News