ದ.ಕ. ಜಿಲ್ಲಾದ್ಯಂತ ಮುಂದುವರಿದ ಮಳೆ: ಅಲ್ಲಲ್ಲಿ ಹಾನಿ

Update: 2020-07-17 06:06 GMT

ಮಂಗಳೂರು, ಜು.17: ದ.ಕ. ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದ ಆರಂಭಗೊಂಡಿರುವ ಮಳೆ ಶುಕ್ರವಾರವೂ ಮುಂದುವರಿದಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಬೊಂಡಂತಿಲದಲ್ಲಿ ಭಾರೀ ಮಳೆಗೆ ಮನೆಯೊಂದರ ಮೇಲೆ ಮರ ಬಿದ್ದು ಭಾಗಶಃ  ಹಾನಿಗೀಡಾಗಿದೆ. ಅದೇರೀತಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮನೆಯೊಂದು ಭಾಗಶಃ ಕುಸಿದಿದೆ. ಬಜ್ಪೆ ಕಳವಾರು ಗ್ರಾಮದಲ್ಲಿ ಕಂಪೌಂಡ್ ಗೋಡೆಯೊಂದು ಕುಸಿದು ಹಾನಿ ಸಂಭವಿಸಿದೆ.

ಮಂಗಳೂರು ನಗರಾದ್ಯಂತವೂ ಮಳೆ ಮುಂದುವರಿದಿದ್ದು, ತೋಡು ಚರಂಡಿಗಳಲ್ಲಿ ಮಳೆ ನೀರು ತುಂಬಿ ಹರಿಯುತ್ತಿದೆ. ನಗರದ ಕಲ್ಲಾಪು ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News