ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Update: 2020-07-18 10:57 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.18: ಕಾಂಗ್ರೆಸ್ ಮುಖಂಡ ಚನ್ನಕೇಶವ ಹತ್ಯೆ ಪ್ರಕರಣ ಸಂಬಂಧ ನಾಲ್ವರನ್ನು ಇಲ್ಲಿನ ಯಲಹಂಕ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಯಲಹಂಕ ನಿವಾಸಿಗಳಾದ ದೇವರಾಜ್, ಮುನಿರಾಜು, ಹೇಮಂತ ಹಾಗೂ ಮುನಿರಾಜು ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಜು.9ರಂದು ಕ್ಷುಲ್ಲಕ ಕಾರಣಕ್ಕಾಗಿ ಯಲಹಂಕದ ಪಾಲನಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕಾಂಗ್ರೆಸ್ ಮುಖಂಡ ಚನ್ನಕೇಶವ ಮೇಲೆ ಗಂಭೀರ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಟ್ಯಾಂಕರ್ ನೀರು ಮಾರಾಟ ಮಾಡುತ್ತಿದ್ದ ಚನ್ನಕೇಶವ ಮಾಲಕತ್ವದ ವಿಚಾರವಾಗಿ ಪ್ರಮುಖ ಆರೋಪಿಯಾದ ದೇವರಾಜ್ ನಡುವೆ ಗಲಾಟೆಯಾಗಿತ್ತು. ಇದೇ ವಿಚಾರವಾಗಿ ಆರೋಪಿಗಳು ಜತೆಗೂಡಿ ಕೃತ್ಯವೆಸಗಿದ್ದು, ಈ ಸಂಬಂಧ ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News