ಕೋವಿಡ್-19 ಹಿನ್ನೆಲೆ: ಕುಡುಪು ಕ್ಷೇತ್ರಕ್ಕೆ ನಾಗರಪಂಚಮಿಗೆ ಪ್ರವೇಶ ನಿರ್ಬಂಧ
Update: 2020-07-19 11:17 GMT
ಮಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು ದೇಗುಲಕ್ಕೆ ನಾಗರಪಂಚಮಿಯಂದು ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ಜು.25ರ ಶನಿವಾರ ನಾಗರಪಂಚಮಿ ದಿನ ಭಕ್ತರ ಪ್ರವೇಶ ಸಂಪೂರ್ಣ ಬಂದ್ ಆಗಿರುವುದಾಗಿ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತೀ ವರ್ಷ ನಾಗರಪಂಚಮಿ ಹಿನ್ನೆಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಸುತ್ತಾರೆ. ನಾಗರ ಪಂಚಮಿಯ ದಿನದಂದು ಸೇವೆಗಳು, ಸೇವಾಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ. ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.