ಉಡುಪಿ ನ್ಯಾಯಾಧೀಶರಿಗೆ ಕೊರೋನ: ನ್ಯಾಯಾಲಯ ಸಂಕೀರ್ಣ ಸೀಲ್‌ಡೌನ್

Update: 2020-07-21 06:30 GMT

ಉಡುಪಿ, ಜು.21: ಉಡುಪಿ ನ್ಯಾಯಾಲಯದ ನ್ಯಾಯಾಧೀಶರೊಬ್ಬರಿಗೆ ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ.

ಈಗಾಗಲೇ ನ್ಯಾಯಾಲಯದ ಗೇಟ್‌ಗಳನ್ನು ಬಂದ್ ಮಾಡಿ, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜು.21 ಮತ್ತು 22ರಂದು ಇಡೀ ನ್ಯಾಯಾಲಯವನ್ನು ಸ್ಯಾನಿಟೈಸ್ ಮಾಡಿ, ಜು.23ರಂದು ಮತ್ತೆ ಕಾರ್ಯ ಆರಂಭಿಸಲಾಗುವುದು. ಈ ಕಾರಣಕ್ಕೆ ಉಡುಪಿ ವಕೀಲರ ಸಂಘದ ಸದಸ್ಯರಿಗೆ ಈಗಾಗಲೇ ನೀಡಿರುವ ಎಲ್ಲ ಅಪಾಯಿಂಟ್‌ಮೆಂಟ್‌ಗಳನ್ನು ಎರಡು ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಮುಖ್ಯ ನ್ಯಾಯಾಧೀಶರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News