ಕೋವಿಡ್ ನಿಯಂತ್ರಣ: ಕೋವಿಡ್ ಉಸ್ತುವಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಬಿಎಸ್‌ವೈ

Update: 2020-07-21 15:20 GMT

ಬೆಂಗಳೂರು, ಜು.21: ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೇರಿಕೆ ಮಾಡಲಾಗಿದ್ದ ಒಂದು ವಾರ ಲಾಕ್‍ಡೌನ್ ಅವಧಿ ಪೂರ್ಣಗೊಂಡಿರುವುದರಿಂದ, ವಲಯವಾರು ಕೋವಿಡ್ ಉಸ್ತುವಾರಿಗಳೊಂದಿಗೆ ಮಹತ್ವದ ಸಭೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಜು.22ರಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ರಾಜರಾಜೇಶ್ವರಿ ನಗರ ವಲಯ, ಮಧ್ಯಾಹ್ನ 12.30 ರಿಂದ 1 ಗಂಟೆಯವರೆಗೆ ದಾಸರಹಳ್ಳಿ ವಲಯ, ಸಂಜೆ 4 ರಿಂದ 5ರವರೆಗೆ ಬೊಮ್ಮನಹಳ್ಳಿ ವಲಯ, ಸಂಜೆ 5 ರಿಂದ 6 ಗಂಟೆಯವರೆಗೆ ಮಹದೇವಪುರ ವಲಯದ ಸಭೆ ನಡೆಯಲಿದೆ.

ಜು.23ರಂದು ಸಂಜೆ 4 ರಿಂದ 5 ಗಂಟೆಯವರೆಗೆ ಪೂರ್ವ ವಲಯ ಮತ್ತು(ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರ), ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಪಶ್ಚಿಮ ವಲಯ(ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ), ಜು.24ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ದಕ್ಷಿಣ ವಲಯ, ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಯಲಹಂಕ ವಲಯದ ಸಭೆಗಳು ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿವೆ ಎಂದು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News