ಕೋವಿಡ್ 19 ನಿಯಂತ್ರಣಕ್ಕೆ ನಿಯಮಗಳನ್ನು ಪಾಲಿಸಿ: ಉಡುಪಿ ಡಿಸಿ ಜಿ. ಜಗದೀಶ್

Update: 2020-07-23 13:55 GMT

ಉಡುಪಿ, ಜು.23: ಜಿಲ್ಲೆಯಲ್ಲಿ ಕೋವಿಡ್-19 (ನೋವೆಲ್ ಕೊರೋನ ವೈರಸ್) ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್‌ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನಗಳನ್ನು ಹೇರುವುದು ಮತ್ತು ಕಂಟೈನ್‌ಮೆಂಟ್ ಹೊರವಲಯಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅಗತ್ಯವೆಂದು ಕಂಡುಬಂದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಜು.22ರಿಂದ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಗಳನ್ನು ಹೊರಡಿಸಿದ್ದಾರೆ.

ಇನ್ನು ಜಿಲ್ಲೆಯ ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಇರುತ್ತದೆ. ವೈದ್ಯಕೀಯ ತುರ್ತು ಸೇವೆಗಳು, ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಕೆಲವೊಂದು ಚಟುವಟಿಕೆಗಳನ್ನು ಹೊರತು ಪಡಿಸಿ, ಎಲ್ಲಾ ಚಟುವಟಿಕೆಗಳನ್ನು ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿ ಸಿದ ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯ ವಿಧಾನಗಳ ಷರತ್ತು ಗಳೊಂದಿಗೆ ನಡೆಸಲು ಅನುಮತಿ ನೀಡಲಾಗಿದೆ.

ರವಿವಾರ ಲಾಕ್‌ಡೌನ್: ಮುಂದಿನ ರವಿವಾರ ಪೂರ್ಣ ದಿನದ ಲಾಕ್‌ಡೌನ್ ಇರುತ್ತದೆ. ಅದರೆ ಅಗತ್ಯ ಸರಕು ಸಾಗಾಣಿಕೆಗೆ ಯಾವುದೇ ನಿರ್ಭಂಧವಿರು ವುದಿಲ್ಲ. ಪೆಟ್ರೋಲ್ ಪಂಪ್/ಮೆಡಿಕಲ್/ಕ್ಲಿನಿಕಲ್ ಲ್ಯಾಬ್ /ಆಸ್ವತ್ರೆ /ಹಾಲು /ದಿನಪತ್ರಿಕೆ ಮಾರಾಟಕ್ಕೆ ನಿರ್ಬಂಧವಿಲ್ಲ. ಹೊಟೇಲ್‌ಗಳಿಂದ ಪಾರ್ಸೆಲ್‌ಗಳಿಗೆ, ಪುಡ್ ಡೆಲಿವರಿಗೆ ಅವಕಾಶವಿದೆ.

ಕಳೆದ ಜು.15ರಿಂದ 29ರಿಂದ ವಿಧಿಸಲಾಗಿದ್ದ 14 ದಿನಗಳ ಜಿಲ್ಲೆಯ ಗಡಿಗಳ ಸೀಲ್‌ಡೌನ್ ತೆರವುಗೊಳಿಸಲಾಗಿದೆ. ಆದರೆ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸಲಿವೆ.ಅನಗತ್ಯವಾಗಿ ಜಿಲ್ಲೆಗೆ ಬರುವವರಿಗೆ ಅವಕಾಶವಿಲ್ಲ. ಅಗತ್ಯ ಕೆಲಸಗಳಿಗೆ ಜಿಲ್ಲೆಗೆ ಆಗಮಿಸುವವರು ಈ ಬಗ್ಗೆ ಅಗತ್ಯ ದಾಖಲೆಗಳನ್ನು ಇರಿಸಿಕೊಂಡು ಅದನ್ನು ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ನೀಡಬೇಕು. ಸಾರ್ವಜನಿಕ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಮಾಸ್ಕ್ ಕಡ್ಡಾಯ: ಸಾರ್ವಜನಿಕರು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲಾ ವ್ಯಕ್ತಿಗಳು ಸುರಕ್ಷಿತ ಅಂತರ ವನ್ನು ಕಾಪಾಡಬೇಕು. ಇವುಗಳ ಉಲ್ಲಂಘನೆಗಾಗಿ ಅಧಿಕಾರಿಗಳು ನಿಗದಿ ಪಡಿಸಿದ ದಂಡವನ್ನು ವಿಧಿಸಬಹುದಾಗಿದೆ. ಸ್ಥಳೀಯ ಪ್ರಾಧಿಕಾರಗಳು ಅದರ ಕಾನೂನು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಿದೆ. ಇದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡವನ್ನು ವಿಧಿಸಬಹುದಾಇದೆ.

ಸರಕಾರಿ ಆದೇಶದಂತೆ ಅನ್‌ಲಾಕ್-2.0 ಮಾರ್ಗಸೂಚಿಗಳಿಗೆ ಬದಲಾವಣೆ ಮಾಡಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ರಾತ್ರಿ ಕರ್ಪ್ಯೂ ರಾತ್ರಿ 9:00ರಿಂದ ಬೆಳಗ್ಗೆ 5:00ರವರೆಗೆ ಜಾರಿಯಲ್ಲಿರುತ್ತದೆ. ಹಾಗೂ ರವಿವಾರದ ಲಾಕ್‌ಡೌನ್ ಪ್ರಸ್ತುತ ಚಾಲ್ತಿಯಲ್ಲಿರುವಂತೆ ಪ್ರತಿ ರವಿವಾರ ಮುಂದುವರಿಯಲಿದೆ. ಈ ಎಲ್ಲಾ ಆದೇಶ ಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಕೋಪ ನಿರ್ವಹಣೆ ಕಾಯ್ದೆ 2005, ಸಾಂಕ್ರಾಮಿಕ ರೋಗಗಳ ಕಾಯ್ದೆ-1897ಮತ್ತು ಐಪಿಸಿ ಸೆಕ್ಷನ್ 188ರ ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News