ಬಾಬರಿ ಮಸೀದಿ ಧ್ವಂಸ ಪ್ರಕರಣ: ಹೇಳಿಕೆ ದಾಖಲಿಸಿದ ಮುರಳಿ ಮನೋಹರ ಜೋಷಿ

Update: 2020-07-23 13:58 GMT

ಹೊಸದಿಲ್ಲಿ, ಜು. 23: ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಯಾಗಿರುವ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.

86ರ ಹರೆಯದ ಮುರಳಿ ಮನೋಹರ್ ಜೋಷಿ ಅವರ ಹೇಳಿಕೆಯನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್ ವೀಡಿಯೊ ಕಾನ್ಫರೆನ್ಸ್ ಮೂಲಕ ದಾಖಲಿಸಿಕೊಂಡರು. ಮಾಜಿ ಮುಖ್ಯಮಂತ್ರಿ ಎಲ್.ಕೆ. ಅಡ್ವಾಣಿ (92) ತಮ್ಮ ಹೇಳಿಕೆಯನ್ನು ಇದೇ ರೀತಿ ಶುಕ್ರವಾರ ದಾಖಲಿಸುವ ಸಾಧ್ಯತೆ ಇದೆ. ಬಾಬರಿ ಮಸೀದಿ ಧ್ವಂಸ ಪ್ರಕರಣ ಸದ್ಯ 32 ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಹಂತದಲ್ಲಿ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News