ಹಿಂದೂ ದೇವತೆಗಳ ಅವಹೇಳನ ಆರೋಪ: ಮುರುಗೇಶ್ ನಿರಾಣಿ ವಿರುದ್ಧ ಕ್ರಮಕ್ಕೆ ಆಗ್ರಹ

Update: 2020-07-23 16:52 GMT

ಬೆಂಗಳೂರು, ಜು.23: ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಬರವಣಿಗೆಯನ್ನು ವಾಟ್ಸ್ ಆಪ್‍ನಲ್ಲಿ ಹರಿಬಿಟ್ಟಿರುವ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕ್ರಮ ಕೈಗೊಳ್ಳುಕು ಎಂದು ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ಸಲ್ಲಿಕೆ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ದೂರು ಸಲ್ಲಿಕೆ ಮಾಡಿದ್ದು, ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಅವರು ಜು.21ರಂದು ವಾಟ್ಸಪ್ ಗುಂಪಿನಲ್ಲಿ, ಹಿಂದೂ ಧರ್ಮದ ಆರಾಧ್ಯ ದೇವತೆಗಳಾದ ರಾಮ, ಕೃಷ್ಣ ಸೇರಿ ಮುಂತಾದ ದೇವರ ಕುರಿತು ಅವಹೇಳನಕಾರಿ, ನಿಂದನೆಯ ಬರಹವನ್ನು ಹಂಚಿಕೆ ಮಾಡಿದ್ದಾರೆ. ಇದರಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ. ಈ ಕುರಿತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News