ಕೋವಿಡ್ ಉಪಕರಣ ಖರೀದಿಯಲ್ಲಿ ಹಗರಣ ನಡೆದಿಲ್ಲ ಎಂದಾದರೆ ತನಿಖೆಗೆ ಹೆದರುವುದೇಕೆ: ಈಶ್ವರ್ ಖಂಡ್ರೆ ಪ್ರಶ್ನೆ

Update: 2020-07-24 05:49 GMT

ಬೆಂಗಳೂರು: ಬಿಜೆಪಿ ಸರ್ಕಾರ ಹೇಳುವಂತೆ ಕೋವಿಡ್ ಉಪಕರಣ ಖರೀದಿಯಲ್ಲಿ ಹಗರಣ ನಡೆದಿಲ್ಲ ಎಂದಾದರೆ ತನಿಖೆಗೆ ಹೆದರುವುದು ಏಕೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು “ಬಿಜೆಪಿ ಸರ್ಕಾರ ಹೇಳುವಂತೆ ಕೋವಿಡ್ ಉಪಕರಣ ಖರೀದಿಯಲ್ಲಿ ಹಗರಣವೇ ಆಗಿಲ್ವೇ ?? ಹಾಗಿದ್ರೆ ತನಿಖೆಗೆ ಹೆದುರುವುದೇಕೆ?? ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕೆ ಜೆ ಜಾರ್ಜ್ ವಿರುದ್ದ ಇದೇ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡಿದ್ರು. ಆ ಸಂದರ್ಭದಲ್ಲಿ ನಮ್ಮ ಸರ್ಕಾರ ತನಿಖೆ ಮಾಡಿರಲಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

"ಡಿ ಕೆ ರವಿ ಪ್ರಕರಣ ಸೇರಿದಂತೆ ಅದೇಷ್ಟೋ ಪ್ರಕರಣ ತನಿಖೆಗೆ ಮಾಡಲಿಲ್ಲವೇ? ಈಗಲೂ ಹಾಲಿ ನ್ಯಾಯಾಧಿಶರಿಂದ ತನಿಖೆಯಾಗಲಿ. ಸತ್ಯ ಹೊರಬರಲಿ" ಎಂದೂ ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News