ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರತಿಭಟನೆ
Update: 2020-07-24 08:21 GMT
ಪುತ್ತೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿಯಾದ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ ರದ್ದು ಸೇರಿದಂತೆ ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಪುತ್ತೂರಿನ ಮಿನಿವಿಧಾನ ಸೌಧದ ಮುಂಬಾಗದಲ್ಲಿ ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಕಮ್ಯೂನಿಸ್ಟ್ ನಾಯಕ ಹಾಗೂ ಪುತ್ತೂರು ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್, ಬೀಡಿ ಕೆಲಸಗಾರರ ಪುತ್ತೂರು ತಾಲೂಕು ಸಂಘದ ಅದ್ಯಕ್ಷ ಗುಡ್ಡಪ್ಪ ಗೌಡ, ಕಾರ್ಮಿಕ ಮುಖಂಡರಾದ ಎಲ್ ಮಂಜುನಾಥ್, ಲೋಕೇಶ್ ಕುದ್ಯಾಗಣೇಶ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಪ್ರತಿಭಟನಾ ಸಭೆಯ ಬಳಿಕ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಾರ್ಮಿಕ ನಾಯಕಿ ಈಶ್ವರಿ ಸ್ವಾಗತಿಸಿದರು. ಕಾರ್ಮಿಕ ನಾಯಕ ಕೇಶವ ವಂದಿಸಿದರು.