ಹಿರಿಯಡ್ಕ: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Update: 2020-07-24 16:18 GMT

ಹಿರಿಯಡ್ಕ, ಜು.24: ವ್ಯವಹಾರಕ್ಕೆ ಮಾಡಿರುವ ಸಾಲವನ್ನು ತೀರಿಸಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರಂದು ಬೆಳಗ್ಗೆ ಬೊಮ್ಮಾರಬೆಟ್ಟು ಗ್ರಾಮದ ಬಸ್ತಿ ಎಂಬಲ್ಲಿ ನಡೆದಿದೆ.

ಮೃತರನ್ನು ಬಸ್ತಿ ನಿವಾಸಿ ಆಶಿಶ್(30) ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಮಗನೊಂದಿಗೆ ಬೆಂಗಳೂರಿನಲ್ಲಿ ವಾಸ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ ಏಜೆನ್ಸಿ ಕಂಪೆನಿಯೊಂದನ್ನು ನಡೆಸಿಕೊಂಡಿದ್ದರು. ಇವರು ವ್ಯವಹಾರದಲ್ಲಿ ಸಾಲ ಮಾಡಿಕೊಂಡಿದ್ದು, ಆರ್ಥಿಕ ಸಮಸ್ಯೆಯಿಂದ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು.

ಸಾಲ ನೀಡಿದವರು ಸಾಲ ಪಾವತಿಸುವಂತೆ ಕರೆ ಮಾಡುತ್ತಿದ್ದು, ಇದರಿಂದ ಮಾನಸಿಕವಾಗಿ ನೊಂದ ಅವರು, ಮನೆಯ ಮಲಗುವ ಕೋಣೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News