ಸುರತ್ಕಲ್: ದನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯ ಸೆರೆ

Update: 2020-07-25 08:35 GMT

ಮಂಗಳೂರು, ಜು.25: ದನ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿದ ಸುರತ್ಕಲ್ ಪೊಲೀಸರು ಮೂರು ಜಾನುವಾರು ಸಹಿತ ಓರ್ವ ಆರೋಪಿಯನ್ನು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕದ ಚೆಕ್ ಪಾಯಿಂಟ್ ನಲ್ಲಿ ಶುಕ್ರವಾರ ರಾತ್ರಿ ಸುಮಾರು 7:30ರ ಸುಮಾರಿಗೆ ಪೊಲೀಸರು ವಾಹನ ತಪಾಸಣೆಯಲ್ಲಿ ನಿರತರಾಗಿದ್ದರು. ಈ ವೇಳೆ ಅನುಮಾನಗೊಂಡ ಪಿಕ್ ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರು ಸಾಗಾಟ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕಾಟಿಪಳ್ಳ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಪೊಲೀಸರು ಒಂದು ಹೋರಿ, ಒಂದು ಹಸು ಹಾಗೂ ಒಂದು ಕರುವನ್ನು ವಶಕ್ಕೆ ಪಡೆದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಜಾನುವಾರುಗಳನ್ನು ಮುಲ್ಕಿ ಕಡೆಯಿಂದ ಸುರತ್ಕಲ್ ನ ಕಾಟಿಪಳ್ಳಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

 ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News