ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಸಾವು
Update: 2020-07-25 16:21 GMT
ಮಂಡ್ಯ, ಜು.25: ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ಮಂಜುನಾಥ್ (21) ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಹಿಂಬದಿ ಸವಾರ ಕಿಶೋರ್ (22)ಗೆ ಗಂಭೀರ ಗಾಯಗಳಾಗಿದ್ದು, ಮಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.