ಸಂಬಂಧಿಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಯುವಕ ಅಪಘಾತದಲ್ಲಿ ಮೃತ್ಯು

Update: 2020-07-25 18:03 GMT

ಬೆಂಗಳೂರು, ಜು.25: ಅನಾರೋಗ್ಯದಿಂದ ಮೃತಪಟ್ಟ ಸಂಬಂಧಿಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅರೆಕೆರೆ ನಿವಾಸಿ ಮಹೇಶ್(21) ಮೃತ ಯುವಕಎಂದು ತಿಳಿದುಬಂದಿದೆ.

ಮಹೇಶ್ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ, ನೆಲಮಂಗಲದಲ್ಲಿ ವಾಸವಾಗಿದ್ದ ಸಂಬಂಧಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಅಂತಿಮ ದರ್ಶನಕ್ಕಾಗಿ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದ. ಇಲ್ಲಿನ ನೈಸ್ ರಸ್ತೆ ಬಳಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News