ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು
Update: 2020-07-25 18:37 GMT
ಆಳಂದ: ಯಾದಗಿರಿ ನಗರದಲ್ಲಿ ಪೊಲೀಸ್ ಇಲಾಖೆಯಲ್ಲಿ ಡಿ.ಎ.ಆರ್ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ರಾಜಕುಮಾರ ಅಕ್ಕಲಕೋಟ್ (29) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತರಿಗೆ ಪತ್ನಿ, ಮಗ, ಪಾಲಕರು ಮತ್ತು ಅನೇಕ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಪೇದೆಯ ಸ್ವಗ್ರಾಮದಲ್ಲಿ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.