ಶ್ರೀನಗರ: ಇಬ್ಬರು ಉಗ್ರರ ಹತ್ಯೆ; ಯೋಧ ಗಾಯಾಳು

Update: 2020-07-25 18:37 GMT

ಶ್ರೀನಗರ, ಜು.26: ಶ್ರೀನಗರದ ಹೊರವಲಯದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

  ಮೃತ ಉಗ್ರರನ್ನು ಇಷ್ಫಾಕ್ ರಶೀದ್ ಮತ್ತು ಇಜಾಝ್ ಭಟ್ ಎಂದು ಗುರುತಿಸಲಾಗಿದೆ. ರಶೀದ್ ಎಲ್‌ಇಟಿ ಸಂಘಟನೆಯ ಉನ್ನತ ಕಮಾಂಡರ್ ಆಗಿದ್ದ ಎಂದು ಮೂಲಗಳು ತಿಳಿಸಿವೆ. ಶ್ರೀನಗರದ ಹೊರವಲಯದ ರಣಬೀರ್‌ಗಢ ಪ್ರದೇಶದಲ್ಲಿ ಉಗ್ರರ ಚಲನವಲನದ ಬಗ್ಗೆ ದೊರೆತ ಮಾಹಿತಿಯಂತೆ ಅಲ್ಲಿಗೆ ಧಾವಿಸಿದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿವೆ. ಆಗ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಓರ್ವ ಯೋಧ ಗಾಯಗೊಂಡಿದ್ದಾನೆ.

ಭದ್ರತಾ ಪಡೆಗಳ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಶೋಧ ಕಾರ್ಯಾಚರಣೆ ಮುಂದವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News