ಪೊಲೀಸ್ ದೌರ್ಜನ್ಯ ಪ್ರಕರಣ: ತನಿಖೆಗೆ ಆಗ್ರಹಿಸಿ ಸಿದ್ಧರಾಮಯ್ಯಗೆ ಪತ್ರ
Update: 2020-07-26 12:52 GMT
ಉಡುಪಿ, ಜು.26: ಕುಂದಾಪುರ ತಾಲೂಕಿನ ಕಂಡ್ಲೂರು ನಿವಾಸಿ ಅಬ್ದುಲ್ಲ ಎಂಬವರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಪೊಲೀಸ್ ಅಧಿಕಾರಿ ವಿರುದ್ಧ ಕಠಿಣ ಕ್ರಮವನ್ನು ಜರಗಿಸುವಂತೆ ಸರಕಾರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಿ ಮುಸ್ಲಿಮ್ ಒಕ್ಕೂಟದ ಮಾಜಿ ಜಿಲ್ಲಾಧ್ಯಕ್ಷ ಎಂ.ಪಿ.ಮೊದಿನಬ್ಬ ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಅಬ್ದುಲ್ಲ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ ಅವರ ವಿರುದ್ಧ ಪ್ರಕರಣ ಕೂಡ ದಾಖಲಿಸಲಾಗಿದೆ. ಈ ಪ್ರಕರಣದಿಂದ ಜಿಲ್ಲೆಯ ಅಲ್ಪಸಂಖ್ಯಾತರು ಭಯ ಭೀತರಾಗುವುದು ಸಹಜವಾಗಿದ್ದು, ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಆ ಅಧಿಕಾರಿಯ ವಿರುಧ್ಧ ಕಠಿಣ ಕ್ರಮವನ್ನು ಜರುಗಿಸುವಂತೆ ಸರಕಾರದ ಮೇಲೆ ಒತ್ತಡ ತರಬೇಕು ಎಂದು ಅವರು ಮನವಿ ಮಾಡಿದ್ದಾರೆ.