ಸಾ.ರಾ.ಮಹೇಶ್ ನನ್ನ ಸಮನಲ್ಲ, ಪ್ರತಿಸ್ಪರ್ಧಿಯೂ ಅಲ್ಲ: ಎಚ್.ವಿಶ್ವನಾಥ್ ವಾಗ್ದಾಳಿ

Update: 2020-07-26 17:00 GMT

ಮೈಸೂರು,ಜು.26: ಶಾಸಕ ಸಾ.ರಾ.ಮಹೇಶ್ ನನ್ನ ಸಮನಲ್ಲ. ಅವನ ಬಗ್ಗೆ ನಾನು ಮಾತನಾಡೋದೆ ಇಲ್ಲ ಎಂದು ವಿಧಾನ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಆಯ್ಕೆಯ ಬಗ್ಗೆ ಕಾನೂನಿನ ತೊಡಕಿದ್ದರೆ ಅದಕ್ಕೆ ರಾಜ್ಯಪಾಲರೇ ಉತ್ತರ ಕೊಡುತ್ತಾರೆ. ಇವರು ಪತ್ರ ಬರೆದಿರೋದರಿಂದ ನನಗೇನು ಸಮಸ್ಯೆ ಇಲ್ಲ. ಅದನ್ನ ತೀರ್ಮಾನ ಮಾಡೋದು ರಾಜ್ಯಪಾಲರು. ಸಾ.ರಾ.ಮಹೇಶ್ ನನಗೆ ಸಮಾನ ಅಲ್ಲ, ನನ್ನ ಪ್ರತಿಸ್ಪರ್ಧಿಯೂ ಅಲ್ಲ. ನಾನಂತು ಅವನ ಬಗ್ಗೆ ಮಾತನಾಡೋಲ್ಲ ಎಂದು ಏಕವಚನದಲ್ಲೆ ಸಾ.ರಾ.ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ರಾಜ್ಯ ಸರ್ಕಾರಕ್ಕೆ ಶುಭಾಶಯ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ತಂಡ ಕಟ್ಟಿಕೊಂಡು ಕೆಲಸ ಮಾಡಿದ್ದಾರೆ. ಆದರೆ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಕೋವಿಡ್ ನುಂಗಿಹಾಕಿದೆ. ಆದರೂ ಕಷ್ಟದ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇಂತಹ ಸರ್ಕಾರ ಬರೋಕೆ ನಾವು ಕಾರಣರಾಗಿದ್ದೇವೆ ಅನ್ನೋದು ನನಗೆ ಹೆಮ್ಮೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News