ಕಳಸಾ-ಬಂಡೂರಿ ನಾಲಾ ಜೋಡಣೆ: ಕೇಂದ್ರಕ್ಕೆ ಮತ್ತೊಂದು ಡಿಪಿಆರ್ ಪ್ರಸ್ತಾವನೆ ಸಲ್ಲಿಕೆ- ಜಗದೀಶ್ ಶೆಟ್ಟರ್

Update: 2020-07-27 16:18 GMT

ಧಾರವಾಡ, ಜು.27: ಕಳಸಾ-ಬಂಡೂರಿ ನಾಲಾ ಜೋಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರಕ್ಕೆ ಮತ್ತೊಂದು ಡಿಪಿಆರ್ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸರಕಾರದ ಒಂದು ವರ್ಷದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಭಾಗದಲ್ಲಿ ಕೆಲಸ ಮಾಡಬೇಕಾಗಿರುವುದರಿಂದ ಹೊಸ ಡಿಪಿಆರ್ ಪ್ರಸ್ತಾವನೆ ಸಲ್ಲಿಸಬೇಕಿದೆ. ಗೆಜೆಟ್ ನೋಟಿಫಿಕೇಶನ್ ಈಗಾಗಲೇ ಆಗಿರುವುದರಿಂದ ಅದರ ಅನ್ವಯ ಹೊಸ ಡಿಪಿಆರ್ ಸಲ್ಲಿಸುವಂತೆ ಕೇಂದ್ರ ಸರಕಾರ ಕೇಳಿದೆ. ಈ ಸಂಬಂಧ ನೀರಾವರಿ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳು ಒಟ್ಟಾಗಿ ಸೇರಿ ಕೆಲಸ ಮಾಡಬೇಕಿದೆ. ಆದರೆ, ಕಾಂಗ್ರೆಸ್ ಸರಕಾರದ ಮೇಲೆ ಆರೋಪ ಮಾಡುವುದರಲ್ಲಿ ನಿರತವಾಗಿದೆ. ಕೋವಿಡ್ ಸಂಬಂಧ ಎಲ್ಲೇ ಅವ್ಯವಹಾರ ಆಗಿದ್ದರೂ ತನಿಖೆ ನಡೆಸುತ್ತೇವೆ. ಜಿಲ್ಲಾ ಮಟ್ಟದಲ್ಲಿ ಅವ್ಯವಹಾರ ಆಗಿದ್ದರೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News