ದೇವಸ್ಥಾನ ವ್ಯವಸ್ಥಾಪನಾ ಸಮಿತಿ: ಅರ್ಜಿ ಆಹ್ವಾನ

Update: 2020-07-27 16:49 GMT

ಮಂಗಳೂರು, ಜು.27: ದ.ಕ. ಜಿಲ್ಲೆಯ ಮಂಗಳೂರಿನ ಪ್ರವರ್ಗ ‘ಬಿ’ ಮತ್ತು ‘ಸಿ’ ವರ್ಗದ 2020ರ ಜೂನ್ ತಿಂಗಳಲ್ಲಿ ಅವಧಿ ಮುಗಿದಿರುವ ಅಧಿಸೂಚಿತ ಸಂಸ್ಥೆಗಳಿಗೆ ಒಂಬತ್ತು ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 15ರೊಳಗಾಗಿ ಸಹಾಯಕ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಮಂಗಳೂರು ಇವರಿಗೆ ಸಲ್ಲಿಸಬೇಕು ಎಂದು ಹಿಂದೂ ಮತ್ತು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News