ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ: ಬಿಎಸ್‌ವೈಗೆ ಸಿದ್ದರಾಮಯ್ಯ ತಿರುಗೇಟು

Update: 2020-07-27 17:35 GMT

ಬೆಂಗಳೂರು, ಜು.27: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಯಡಿಯೂರಪ್ಪನವರಿಗೆ ಅಭಿನಂದನೆಗಳು ಎಂದು  ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, "ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಯಡಿಯೂರಪ್ಪನವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿರುವ ನೀವು ತುಸು ಬಿಡುವು ಮಾಡಿಕೊಂಡು, ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಿಮ್ಮ 'ಸಾಧನೆ'ಯ ಬಗ್ಗೆ ಮುಂದೆ ಮಾತನಾಡೋಣ' ಎಂದು ತಿರುಗೇಟು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News