ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ: ಠಾಕ್ರೆ ಹೇಳಿಕೆಗೆ ಶರದ್ ಪವಾರ್ ಬೆಂಬಲ

Update: 2020-07-28 16:13 GMT

ಮುಂಬೈ, ಜು.28: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ, ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅಧಿಕ ಸಂಖ್ಯೆಯಲ್ಲಿ ಜನ ಸೇರಲು ಇದು ಸೂಕ್ತ ಸಮಯವಲ್ಲ. ಶಿಲಾನ್ಯಾಸ ಕಾರ್ಯಕ್ರಮವನ್ನು ಆಯ್ದ ಕೆಲವೇ ಜನರ ಉಪಸ್ಥಿತಿಯಲ್ಲಿ ನಡೆಸಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿಲುವಿಗೆ ಎನ್‌ಸಿಪಿ ಮುಖಂಡ ಶರದ್ ಪವಾರ್ ಬೆಂಬಲಿಸಿದ್ದಾರೆ.

“ನೀವು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಿರಾ ಎಂಬ ಪ್ರಶ್ನೆಯನ್ನು ನನ್ನ ಮುಂದಿರಿಸಿದ್ದರು. ಇಲ್ಲ ನಾನು ಹೋಗುವುದಿಲ್ಲ. ಕಾರ್ಯಕ್ರಮಕ್ಕೆ ನನ್ನ ವಿರೋಧವಿಲ್ಲ. ಆದರೆ ಕೊರೋನಕ್ಕೆ ಮೊದಲ ಆದ್ಯತೆ ನೀಡುವುದರಿಂದ ಮುಂಬೈ ಬಗ್ಗೆ ಹೆಚ್ಚಿನ ಗಮನ ಕೇಂದ್ರೀಕರಿಸಿರುವುದಾಗಿ ಉತ್ತರಿಸಿದ್ದೇನೆ” ಎಂದು ಪವಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News