ಟಿಪ್ಪು ಅಧ್ಯಾಯ ಕೈಬಿಟ್ಟಿರುವ ವಿಚಾರ: ಸಿಎಂ ಜೊತೆ ಚರ್ಚಿಸುತ್ತೇನೆ- ಸಚಿವ ಶ್ರೀಮಂತ ಪಾಟೀಲ

Update: 2020-07-29 11:46 GMT

ಬಾಗಲಕೋಟೆ, ಜು.19: ಪಠ್ಯಪುಸ್ತಕದಿಂದ ಟಿಪ್ಪು ಅಧ್ಯಾಯವನ್ನು ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಚರ್ಚಿಸುತ್ತೇನೆಂದು ಅಲ್ಪಸಂಖ್ಯಾತ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಅಧ್ಯಾಯವನ್ನು ಪಠ್ಯದಿಂದ ತೆಗೆದಿರುವುದು ಸೂಕ್ಷ್ಮವಾದ ವಿಚಾರವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಗೊಂದಲವನ್ನು ಬಗೆಹರಿಸಲಾಗುವುದು. ಬಿಜೆಪಿಯಲ್ಲಿ ಜಾತಿ, ಧರ್ಮ ಹಾಗೂ ಭಾಷೆಯ ವಿಚಾರದಲ್ಲಿ ಭೇದಭಾವ ಮಾಡುವುದಿಲ್ಲವೆಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News