ಜು.31ಕ್ಕೆ ಡಿಕೆಶಿ ದ.ಕ.ಜಿಲ್ಲಾ ಪ್ರವಾಸ

Update: 2020-07-29 13:00 GMT

ಮಂಗಳೂರು, ಜು.29: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜು.31ರಂದು ದ.ಕ.ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ಅಂದು ಬೆಳಗ್ಗೆ 10:30ಕ್ಕೆ ಕೇಂದ್ರದ ಮಾಜಿ ಸಚಿವ ಡಾ. ಆಸ್ಕರ್ ಫೆರ್ನಾಂಡಿಸ್‌ರ ಮನೆ, ಪೂ.11ಕ್ಕೆ ಮಂಗಳೂರು ಬಿಷಪ್ ಹೌಸ್, 11:30ಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಭವನಕ್ಕೆ, ಮಧ್ಯಾಹ್ನ 1 ಗಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ, ಅಪರಾಹ್ನ 3 ಗಂಟೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯ ಬಂಟ್ವಾಳದ ಮನೆ, ಸಂಜೆ 4 ಗಂಟೆಗೆ ಉಡುಪಿ ಖಾಝಿ ಬೇಕಲ್ ಇಬ್ರಾಹೀಂ ಮುಸ್ಲಿಯಾರ್‌ರ ಮುಡಿಪುವಿನಲ್ಲಿರುವ ಮನೆ, ಸಂಜೆ 6:45ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News