ಉಡುಪಿ: ‘ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ’ ಎಂಬ ಹೇಳಿಕೆ ಹಿಂಪಡೆದ ಅಧಿಕಾರಿಗಳು
Update: 2020-07-29 17:39 GMT
ಉಡುಪಿ: "ಜಾನುವಾರು ಸಾಗಿಸುವವರ ವಿರುದ್ಧ ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಡಿಸಿ ಜಿ. ಜಗದೀಶ್ ಹೇಳಿದ್ದಾರೆ ಎನ್ನುವ ವರದಿಯನ್ನು ಅಧಿಕಾರಿಗಳ ಕಣ್ತಪ್ಪಿನಿಂದಾಗಿ ಪತ್ರಿಕೆಗಳಿಗೆ ಬಿಡುಗಡೆ ಮಾಡಲಾಗಿದೆ" ಎಂದು ಉಡುಪಿ ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಸ್ಪಷ್ಟನೆ ನೀಡಿದ್ದಾರೆ.
'ವಾರ್ತಾ ಭಾರತಿ' ಜೊತೆ ಮಾತನಾಡಿದ ಅವರು, ‘ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಎಂಬ ವರದಿ ಆನ್ ಲೈನ್ ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದರಿಂದ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ಈ ಹೇಳಿಕೆಯನ್ನು ಹಿಂಪಡೆಯಲಾಗಿದೆ” ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಗದೀಶ್, ನಾನು ಆ ರೀತಿಯ ಹೇಳಿಕೆ ನೀಡಿಲ್ಲ. ಅದು ಅಧಿಕಾರಿಗಳ ಕಣ್ತಪ್ಪಿನಿಂದಾದ ಎಡವಟ್ಟು ಎಂದಿದ್ದಾರೆ.