ರಾಜ್ಯದಲ್ಲಿಯೂ ನೂತನ ಶಿಕ್ಷಣ ನೀತಿಯ ಪ್ರಮುಖ ಅಂಶಗಳ ಜಾರಿಗೆ ಚಿಂತನೆ: ಸುರೇಶ್‍ ಕುಮಾರ್

Update: 2020-07-29 17:47 GMT

ಬೆಂಗಳೂರು, ಜು.29: ಕೇಂದ್ರ ಸರಕಾರ ಅನುಮೋದಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಅಂಶಗಳನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನೂತನವಾಗಿ ಜಾರಿಯಾಗಲಿರುವ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸರ್ವರಿಗೂ ಗುಣಮಟ್ಟದ ಶಿಕ್ಷಣ ಲಭ್ಯ ಆಗಬೇಕೆನ್ನುವುದು ನಮ್ಮೆಲ್ಲರ ಆಕಾಂಕ್ಷೆಯಾಗಿದೆ. ಈ ಧ್ಯೇಯವಾಕ್ಯದ ಆಧಾರದ ಮೇಲೆ ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ಇಲಾಖೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News