ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಸಚಿವ ಆರ್.ಅಶೋಕ್

Update: 2020-07-30 06:35 GMT

ಬೆಂಗಳೂರು, ಜು.30: ಸಿಎಂ ಖುರ್ಚಿ ಖಾಲಿಯಿಲ್ಲ. ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್.ವೈ ರವರೇ ನಮ್ಮ ಸಿಎಂ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ ವರ್ಷದ ಪ್ರವಾಹ ಸಮಯದಲ್ಲಿ ಹಾಗೂ ಈಗಿನ ಕೋವಿಡ್-19 ಸೋಂಕು ಸನ್ನಿವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಕ್ತಿಮೀರಿ ಹಗಲಿರುಳು ದುಡಿದು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹೀಗಿರುವಾಗ ನಾಯಕತ್ವ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಸಿಎಂ ಖುರ್ಚಿ ಖಾಲಿಯಿಲ್ಲ. ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್.ವೈ ರವರೇ ನಮ್ಮ ಸಿಎಂ ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News