ಜನತೆಯ ಹಿತದ ಮುಂದೆ ಯಾವ ಮುಲಾಜೂ ಇಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ

Update: 2020-07-30 09:47 GMT

ಬೆಂಗಳೂರು, ಜು.30: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸರ್ಕಾರ ನಿರ್ದಿಷ್ಟ ದರ ನಿಗದಿ ಮಾಡಿದೆ. ಆದರೆ ಕೆಲವು ಆಸ್ಪತ್ರೆಗಳು ಜನರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿವೆ ಎಂಬ ವರದಿಗಳು ಬರುತ್ತಿವೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈಗಾಗಲೇ ಯಾವ ಯಾವ ಆಸ್ಪತ್ರೆಗಳು ಈ ರೀತಿ ಹೆಚ್ಚು ಹಣ ಸುಲಿಗೆ ಮಾಡುತ್ತಿವೆ ಎಂಬ ಪಟ್ಟಿ ತಯಾರಿಸಲಾಗಿದೆ. ಅಂತಹ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯದ ಜನತೆಯ ಹಿತದ ಮುಂದೆ ಯಾವ ಮುಲಾಜೂ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News