ಪರಿಷತ್ ಗೆ ನಾಮ ನಿರ್ದೇಶನಗೊಂಡ ಐವರು ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

Update: 2020-07-30 16:13 GMT

ಬೆಂಗಳೂರು, ಜು.30:  ರಾಜ್ಯ ವಿಧಾನ ಪರಿಷತ್ತಿಗೆ ನೂತನವಾಗಿ ನಾಮ ನಿರ್ದೇಶನಗೊಂಡ ಸದಸ್ಯರು ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಿ.ಪಿ.ಯೋಗೇಶ್ವರ್, ಅಡಗೂರು ಎಚ್.ವಿಶ್ವನಾಥ್, ಶಾಂತಾರಾಮ್ ಬುಡ್ನ ಸಿದ್ದಿ, ಡಾ.ತಳವಾರ್ ಸಾಬಣ್ಣ ಭಗವಂತನ ಹೆಸರಿನಲ್ಲಿ ಹಾಗೂ ಭಾರತಿ ಶೆಟ್ಟಿ ಭಾರತಮಾತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪ ಚಂದ್ರ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಮಾಜಿ ಸಚಿವ ರಾಮಚಂದ್ರೇಗೌಡ, ಸರಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿ ಮಠ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪ್ರಮಾಣ ವಚನದ ಕಾರ್ಯಕ್ರಮ ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News