ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಎಸಿಬಿ ದಾಳಿ

Update: 2020-07-30 16:54 GMT

ಬೆಂಗಳೂರು, ಜು.30: ಸಾರ್ವಜನಿಕರಿಂದ ಹಣ ಪಡೆದು ಅಕ್ರಮ ವ್ಯವಹಾರದಲ್ಲಿ ಭಾಗಿಯಾಗಿದ್ದ ಆರೋಪ ಹಿನ್ನೆಲೆ ಮೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವುದಾಗಿ ವರದಿಯಾಗಿದೆ.

ಗುರುವಾರ ಇಲ್ಲಿನ ದೇವನಹಳ್ಳಿ, ಕೆ.ಆರ್.ಪುರಂ ಹಾಗೂ ಬಿದಿರಹಳ್ಳಿ ಬಳಿ ಇರುವ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಈ ಮೂರು ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಆಸ್ತಿ ನೋಂದಣಿ, ಋಣಭಾರ ಪತ್ರ ಖರೀದಿ, ವಾಹನ ನೋಂದಣಿ, ಬೇರೆ ಬೇರೆ ವಿಚಾರದಲ್ಲಿ ಅವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News