ರೌಡಿಗೆ ಚೂರಿ ಇರಿದ ಪೊಲೀಸ್ ಪೇದೆಯ ಪುತ್ರ

Update: 2020-07-30 17:55 GMT

ಬೆಂಗಳೂರು, ಜು.30: ಪೊಲೀಸ್ ಇಲಾಖೆಯ ಮುಖ್ಯ ಪೇದೆಯ ಪುತ್ರನೋರ್ವ ರೌಡಿಯೋರ್ವನಿಗೆ ಚಾಕು ಇರಿದಿರುವ ಘಟನೆ ಇಲ್ಲಿನ ತುಮಕೂರು ರಸ್ತೆಯ ಬಳಿ ನಡೆದಿದೆ ಎಂದು ವರದಿಯಾಗಿದೆ.

ಹೊಸಹಳ್ಳಿ ಪೊಲೀಸ್ ಠಾಣೆಯ ಮುಖ್ಯಪೇದೆ ಪುತ್ರ ಗೌತಮ್, ರೌಡಿ ರಘು ಎಂಬಾತನಿಗೆ ಚಾಕು ಇರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ನಗರದ ತುಮಕೂರು ರಸ್ತೆಯ ಪಿಳ್ಳಿ ಡಾಬಾದಲ್ಲಿ ಈ ಘಟನೆ ನಡೆದಿದ್ದು, ಗೌತಮ್ ಮತ್ತು ರಘು ಡಾಬಾದಲ್ಲಿ ಮದ್ಯ ಸೇವಿಸಲು ಜೊತೆಯಾಗಿದ್ದಾರೆ. ಈ ಸಮಯದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದ್ದು ರಘು ಮೇಲೆ ಗೌತಮ್ ಹಲ್ಲೆ ನಡೆಸಿ, ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ.

ಚೂರಿ ಇರಿತಕ್ಕೆ ಒಳಗಾದ ರಘು ಅನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳಿಸಲಾಗಿದ್ದು, ಗೌತಮ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಮುಂದಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News