​ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಿಂದ ಮಾಜಿ ಸಚಿವ ಆಸ್ಕರ್ ಭೇಟಿ

Update: 2020-07-31 05:55 GMT

ಮಂಗಳೂರು, ಜು.31:ಕೆಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ರವರನ್ನು ನಗರದ ಮೇರಿಹಿಲ್ ನಲ್ಲಿರುವ ನಿವಾಸದಲ್ಲಿ ಇತರ ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಅಭಯ ಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಸಂಸದ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿ ಸೋಜ, ಯು.ಆರ್. ಸಭಾಪತಿ, ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು. 

ಬಳಿಕ ಡಿ.ಕೆ. ಶಿವ ಕುಮಾರ್ ಹಾಗೂ ಕಾಂಗ್ರೆಸ್ ತಂಡ ಬಿಷಪ್ ಹೌಸ್ ಗೆ ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News